ಹಕ್ಕಿಜ್ವರ : ಕೋಳಿ-ಮೊಟ್ಟೆ ಸೇವಿಸುವವರಿಗೆ ಅಲರ್ಟ್ ಕೊಟ್ಟ ಆರೋಗ್ಯ ಸಚಿವ...!!
ಹಕ್ಕಿಜ್ವರ : ಕೋಳಿ-ಮೊಟ್ಟೆ ಸೇವಿಸುವವರಿಗೆ ಅಲರ್ಟ್ ಕೊಟ್ಟ ಆರೋಗ್ಯ ಸಚಿವ...!!

ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ಹಕ್ಕಿಜ್ವರ ವರದಿಯಾಗಿವೆ. ಸಾರ್ವಜನಿಕರು ಈ ಬಗ್ಗೆ ಆತಂಕದಲ್ಲಿದ್ದು, ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಮಾಹಿತಿ ತಿಳಿಸಿದ್ದಾರೆ.
ಹಕ್ಕಿಜ್ವರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು "ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ. ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ. ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು" ಎಂದಿದ್ದಾರೆ.

Commentaires