top of page

ನಿವೃತ್ತಿ ವದಂತಿಯ ಬಗ್ಗೆ ಮೌನ ಮುರಿದ ರವೀಂದ್ರ ಜಡೇಜಾ...!

ನಿವೃತ್ತಿ ವದಂತಿಯ ಬಗ್ಗೆ ಮೌನ ಮುರಿದ ರವೀಂದ್ರ ಜಡೇಜಾ...!

ಮಾರ್ಚ್ 09ರ ಭಾನುವಾರ ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅದ್ಭುತ ಬೌಲಿಂಗ್ ಮಾಡಿದರು. ಈ ಸ್ಟಾರ್ ಆಲ್‌ರೌಂಡರ್ ತಮ್ಮ 10 ಓವರ್‌ಗಳ ಖೋಟಾದಲ್ಲಿ ಕೇವಲ 30 ರನ್‌ಗಳನ್ನು ನೀಡಿ ಟಾಮ್ ಲ್ಯಾಥಮ್ ಅವರ ವಿಕೆಟ್ ಪಡೆದರು. ಆದರೆ ಈ ಪಂದ್ಯದಲ್ಲಿ ಜಡೇಜಾ ತಮ್ಮ ಖೋಟಾದ ಕೊನೆಯ ಓವರ್ ಬೌಲ್ ಮಾಡಿದ ಬಳಿಕ ತಂಡದ ಸಹ ಆಟಗಾರ ವಿರಾಟ್ ಕೊಹ್ಲಿ ಜಡೇಜಾ ಅವರನ್ನು ಅಪ್ಪಿಕೊಂಡಿದ್ದರು. ಇದು ಅಭಿಮಾನಿಗಳಲ್ಲಿ ಈ ಪಂದ್ಯದ ನಂತರ ಜಡೇಜಾ ನಿವೃತ್ತಿ ಹೊಂದಬಹುದೆಂಬ ಅನುಮಾನವನ್ನು ಸೃಷ್ಟಿಸಿತ್ತು.

ಆದರೆ ಈಗ ಸ್ವತಃ ಜಡೇಜಾ ಅವರೇ ಈ ವದಂತಿಗಳಿಗೆ ಅಂತ್ಯ ಹಾಡಿದ್ದಾರೆ. ಮಾರ್ಚ್ 10 ರಂದು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಒಂದು ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಜಡೇಜಾ, "ಅನಗತ್ಯ ವದಂತಿಗಳು ಬೇಡ, ಧನ್ಯವಾದಗಳು" ಎಂದು ಬರೆದುಕೊಂಡಿದ್ದಾರೆ. ಜಡೇಜಾ ಅವರ ಈ ಪೋಸ್ಟ್​ ಅನ್ನು ನೋಡಿದ ಅಭಿಮಾನಿಗಳು, ಜಡೇಜಾ ನಿವೃತ್ತಿಯ ವದಂತಿಯ ಬಗ್ಗೆಯೇ ಈ ಪೋಸ್ಟ್ ಬರೆದಿದ್ದಾರೆ ಎಂದು ಹೇಳ ತೊಡಗಿದ್ದಾರೆ. ಹಾಗೆಯೇ ತಮ್ಮ ನೆಚ್ಚಿನ ಆಟಗಾರ ನಿವೃತ್ತಿ ಹೊಂದುತ್ತಿಲ್ಲ ಎಂಬ ವಿಷಯ ತಿಳಿದ ಬಳಿಕ ಅವರ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.


Comments


Top Stories

Stay updated with the latest news and stories from Karnataka. Subscribe to our newsletter for weekly updates.

© 2024 by NANU PATRAKARTHA. All rights reserved.

bottom of page